30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

ಕುವೆಟ್ಟು: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹೆದ್ದಾರಿಯ ಕೆಲಸ ನಡೆಯುತ್ತಿದ್ದು ಮದ್ದಡ್ಕ ಪೇಟೆಯಲ್ಲಿ ಚರಂಡಿಯ ಕೆಲಸವನ್ನು ಸಂಪೂರ್ಣಗೊಳಿಸದೆ ಕಳೆದ ಒಂದು ತಿಂಗಳ ಹಿಂದೆ ಸ್ತಗಿತಗೊಳಿಸಿದ್ದು ಪೇಟೆಯ ವರ್ತಕರಿಗೆ, ಬ್ಯಾಂಕ್, ಹೋಟೆಲ್ ಇನ್ನಿತರ ವ್ಯಾಪರಸ್ಥರಿಗೆ ಗ್ರಾಹಕರಿಗೆ ಪೇಟೆಯ ಜನತೆಗೆ ಬಹಳ ತೊಂದರೆಯನ್ನು ಅನುಭವಿಸುತ್ತಿದ್ದು ತಕ್ಷಣ ಕಾಮಗಾರಿಯನ್ನು ಪ್ರಾರಂಭ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕ ಮಾಡಿ ತಿಳಿಸಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾರವರಿಗೆ ಮನವಿ ನೀಡುವ ಮೂಲಕ ಫೆ 12 ರಂದು ಒತ್ತಾಯಿಸಲಾಯಿತು.

ತಕ್ಷಣ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಮಾಹಿತಿ ಪಡೆದುಕೊಂಡು 3 ದಿನಗಳಲ್ಲಿ ಮದ್ದಡ್ಕ ಪೇಟೆಯ‌ ಎಲ್ಲಾ ವ್ಯಾಪರಸ್ತರ ಸಭೆಯನ್ನು ಕರೆದು ತೊಂದರೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಅಬ್ಬೋನ್ ಮದ್ದಡ್ಕ. ಶ್ರೀ ದುರ್ಗಾ ಟ್ರೇಡರ್ಸ್ ನ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶೇಖರ್ ಶೆಟ್ಟಿ ಹೋಟೆಲ್ ದತ್ತಗುರು ಮದ್ದಡ್ಕ ವರ್ತಕರ ಸಂಘದ ಸದಸ್ಯರಾದ ವೈ ಕೆ ಸ್ಟೋರ್ ಇದರ ಮಾಲಕ ಯಾಕುಬ್ ಮತ್ತು ಉಮೇಶ್ ಕುಮಾರ್ ಮನು ಸ್ಟುಡಿಯೋ ಮದ್ದಡ್ಕ ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!