33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

ಕುವೆಟ್ಟು: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹೆದ್ದಾರಿಯ ಕೆಲಸ ನಡೆಯುತ್ತಿದ್ದು ಮದ್ದಡ್ಕ ಪೇಟೆಯಲ್ಲಿ ಚರಂಡಿಯ ಕೆಲಸವನ್ನು ಸಂಪೂರ್ಣಗೊಳಿಸದೆ ಕಳೆದ ಒಂದು ತಿಂಗಳ ಹಿಂದೆ ಸ್ತಗಿತಗೊಳಿಸಿದ್ದು ಪೇಟೆಯ ವರ್ತಕರಿಗೆ, ಬ್ಯಾಂಕ್, ಹೋಟೆಲ್ ಇನ್ನಿತರ ವ್ಯಾಪರಸ್ಥರಿಗೆ ಗ್ರಾಹಕರಿಗೆ ಪೇಟೆಯ ಜನತೆಗೆ ಬಹಳ ತೊಂದರೆಯನ್ನು ಅನುಭವಿಸುತ್ತಿದ್ದು ತಕ್ಷಣ ಕಾಮಗಾರಿಯನ್ನು ಪ್ರಾರಂಭ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕ ಮಾಡಿ ತಿಳಿಸಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾರವರಿಗೆ ಮನವಿ ನೀಡುವ ಮೂಲಕ ಫೆ 12 ರಂದು ಒತ್ತಾಯಿಸಲಾಯಿತು.

ತಕ್ಷಣ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಮಾಹಿತಿ ಪಡೆದುಕೊಂಡು 3 ದಿನಗಳಲ್ಲಿ ಮದ್ದಡ್ಕ ಪೇಟೆಯ‌ ಎಲ್ಲಾ ವ್ಯಾಪರಸ್ತರ ಸಭೆಯನ್ನು ಕರೆದು ತೊಂದರೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಅಬ್ಬೋನ್ ಮದ್ದಡ್ಕ. ಶ್ರೀ ದುರ್ಗಾ ಟ್ರೇಡರ್ಸ್ ನ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶೇಖರ್ ಶೆಟ್ಟಿ ಹೋಟೆಲ್ ದತ್ತಗುರು ಮದ್ದಡ್ಕ ವರ್ತಕರ ಸಂಘದ ಸದಸ್ಯರಾದ ವೈ ಕೆ ಸ್ಟೋರ್ ಇದರ ಮಾಲಕ ಯಾಕುಬ್ ಮತ್ತು ಉಮೇಶ್ ಕುಮಾರ್ ಮನು ಸ್ಟುಡಿಯೋ ಮದ್ದಡ್ಕ ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!