23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

ಕುವೆಟ್ಟು: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹೆದ್ದಾರಿಯ ಕೆಲಸ ನಡೆಯುತ್ತಿದ್ದು ಮದ್ದಡ್ಕ ಪೇಟೆಯಲ್ಲಿ ಚರಂಡಿಯ ಕೆಲಸವನ್ನು ಸಂಪೂರ್ಣಗೊಳಿಸದೆ ಕಳೆದ ಒಂದು ತಿಂಗಳ ಹಿಂದೆ ಸ್ತಗಿತಗೊಳಿಸಿದ್ದು ಪೇಟೆಯ ವರ್ತಕರಿಗೆ, ಬ್ಯಾಂಕ್, ಹೋಟೆಲ್ ಇನ್ನಿತರ ವ್ಯಾಪರಸ್ಥರಿಗೆ ಗ್ರಾಹಕರಿಗೆ ಪೇಟೆಯ ಜನತೆಗೆ ಬಹಳ ತೊಂದರೆಯನ್ನು ಅನುಭವಿಸುತ್ತಿದ್ದು ತಕ್ಷಣ ಕಾಮಗಾರಿಯನ್ನು ಪ್ರಾರಂಭ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕ ಮಾಡಿ ತಿಳಿಸಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾರವರಿಗೆ ಮನವಿ ನೀಡುವ ಮೂಲಕ ಫೆ 12 ರಂದು ಒತ್ತಾಯಿಸಲಾಯಿತು.

ತಕ್ಷಣ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಮಾಹಿತಿ ಪಡೆದುಕೊಂಡು 3 ದಿನಗಳಲ್ಲಿ ಮದ್ದಡ್ಕ ಪೇಟೆಯ‌ ಎಲ್ಲಾ ವ್ಯಾಪರಸ್ತರ ಸಭೆಯನ್ನು ಕರೆದು ತೊಂದರೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಅಬ್ಬೋನ್ ಮದ್ದಡ್ಕ. ಶ್ರೀ ದುರ್ಗಾ ಟ್ರೇಡರ್ಸ್ ನ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶೇಖರ್ ಶೆಟ್ಟಿ ಹೋಟೆಲ್ ದತ್ತಗುರು ಮದ್ದಡ್ಕ ವರ್ತಕರ ಸಂಘದ ಸದಸ್ಯರಾದ ವೈ ಕೆ ಸ್ಟೋರ್ ಇದರ ಮಾಲಕ ಯಾಕುಬ್ ಮತ್ತು ಉಮೇಶ್ ಕುಮಾರ್ ಮನು ಸ್ಟುಡಿಯೋ ಮದ್ದಡ್ಕ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!