ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿಶೇಷವಾಗಿ ಮಕ್ಕಳ ಸಮಿತಿಯನ್ನು ಫೆ.11 ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಉದ್ಘಾಟಿಸಿ, ಕೂಪನ್ ಬಿಡುಗಡೆಗೊಳಿಸಿದರು.

ನಂತರ ಮಕ್ಕಳ ಸಮಿತಿ ರಚನೆ ಮಾಡಿ ಗಂಡು ಮಕ್ಕಳ ತಂಡಕ್ಕೆ ಉಜ್ವಲ ಮತ್ತು ಹೆಣ್ಣು ಮಕ್ಕಳ ತಂಡಕ್ಕೆ ಭವಿಷ್ಯ ಎಂಬ ರಚಿಸಿ ಮಕ್ಕಳಲ್ಲಿ ಕೆಲವರನ್ನು ಪ್ರಮುಖರನ್ನಾಗಿ ಮಾಡಿ ಎಲ್ಲರಿಗೂ ಜವಾಬ್ದಾರಿಯನ್ನು ಹಂಚಲಾಯಿತು. ದೇವಸ್ಥಾನದಲ್ಲಿ ಪ್ರಮುಖರು ಸೇರಿ ಮಕ್ಕಳಿಗೆ ಪ್ರತಿ ಭಾನುವಾರ ಬೆಳಗ್ಗೆ ಶ್ಲೋಕ ಹೇಳಿ ಕೊಡುವುದಾಗಿ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಮೋಹನ್ ಬಂಗೇರ ಕಾರಿಂಜ, ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ಪ್ರಧಾನ ಕಾರ್ಯದರ್ಶಿ ಕೆ ದಾಸಪ್ಪ ಗೌಡ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ. ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ಡಿ.ದಿನೇಶ್ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ವಿನಯ ಚಂದ್ರ ಮಾಧ್ಯಮ ಪ್ರಮುಖ್ ಸುರೇಂದ್ರ ಪೂಜಾರಿ ಹಾಗೂ ಬ್ರಹ್ಮಕಲಶ ಮತ್ತು ಜೀರ್ಣೋದರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!