37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿಶೇಷವಾಗಿ ಮಕ್ಕಳ ಸಮಿತಿಯನ್ನು ಫೆ.11 ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಉದ್ಘಾಟಿಸಿ, ಕೂಪನ್ ಬಿಡುಗಡೆಗೊಳಿಸಿದರು.

ನಂತರ ಮಕ್ಕಳ ಸಮಿತಿ ರಚನೆ ಮಾಡಿ ಗಂಡು ಮಕ್ಕಳ ತಂಡಕ್ಕೆ ಉಜ್ವಲ ಮತ್ತು ಹೆಣ್ಣು ಮಕ್ಕಳ ತಂಡಕ್ಕೆ ಭವಿಷ್ಯ ಎಂಬ ರಚಿಸಿ ಮಕ್ಕಳಲ್ಲಿ ಕೆಲವರನ್ನು ಪ್ರಮುಖರನ್ನಾಗಿ ಮಾಡಿ ಎಲ್ಲರಿಗೂ ಜವಾಬ್ದಾರಿಯನ್ನು ಹಂಚಲಾಯಿತು. ದೇವಸ್ಥಾನದಲ್ಲಿ ಪ್ರಮುಖರು ಸೇರಿ ಮಕ್ಕಳಿಗೆ ಪ್ರತಿ ಭಾನುವಾರ ಬೆಳಗ್ಗೆ ಶ್ಲೋಕ ಹೇಳಿ ಕೊಡುವುದಾಗಿ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಮೋಹನ್ ಬಂಗೇರ ಕಾರಿಂಜ, ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ಪ್ರಧಾನ ಕಾರ್ಯದರ್ಶಿ ಕೆ ದಾಸಪ್ಪ ಗೌಡ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ. ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ಡಿ.ದಿನೇಶ್ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ವಿನಯ ಚಂದ್ರ ಮಾಧ್ಯಮ ಪ್ರಮುಖ್ ಸುರೇಂದ್ರ ಪೂಜಾರಿ ಹಾಗೂ ಬ್ರಹ್ಮಕಲಶ ಮತ್ತು ಜೀರ್ಣೋದರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Related posts

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!