24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

ಗೇರುಕಟ್ಟೆ : ಫೆ.11 ರಂದು ಕಳಿಯ ಗ್ರಾಮ ಪಂಚಾಯತ್ ಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿತು.

ಗೇರುಕಟ್ಟೆ ಪೇಟೆಯಿಂದ ಪಂಚಾಯತ್ ತನಕ ವಾಹನ ಜಾಥ, ವಿವಿಧ ಇಲಾಖೆ ಸಿಬ್ಬಂದಿಗಳು, ಗ್ರಾಮಸ್ಥರು, ರಥವನ್ನು ಸ್ವಾಗತಿಸಿದರು.ಪಂಚಾಯತ್ ವ್ಯಾಪ್ತಿಯ ಪ್ರಾಥಮಿಕ ಮತ್ತು ಫ್ರೌಡ ಶಾಲಾ ವಿಧ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ವಿವಿಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುರತ್ಕಲ್ ಕಲಾ ತಂಡದವರಿಂದ ಸಂವಿಧಾನದ ಬಗ್ಗೆ ಜಾಗೃತಿ ನಾಟಕ ಪ್ರದರ್ಶನ ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ ಅಂಬೇಡ್ಕರ್ ಪ್ರತಿಮೆಗೆ ಹಾರ ಹಾಕಿ, ಪುಷ್ಪರ್ಚಾಣೆ ಮಾಡಿದ್ದಾರೆ.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಸದಸ್ಯರಾದ ಅಬ್ದುಲ್ ಕರೀಂ,ಲತೀಫ್ ಪರಿಮ,ಕುಸುಮ ಎನ್,ಬಂಗೇರ,ಮರೀಟಾ ಪಿಂಟೋ,ಶ್ವೇತಾ ಶ್ರೀನಿವಾಸ, ಪುಷ್ಪ ನಾಳ, ಅಂಬೇಡ್ಕರ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೆಂಕಣ್ಣ ಕೊಯ್ಯೂರು,ಜಿಲ್ಲಾ ಮಾನವ ಬಂಧುತ್ವ ಸಂಚಾಲಕ ಚನ್ನಕೇಶವ ಬೆಳ್ತಂಗಡಿ, ಸುರತ್ಕಲ್ ಜಾನಪದ ಕಲಾಸಂಘದ ಸದಸ್ಯರು,ಗೇರುಕಟ್ಚೆ ಅಟೋ ಚಾಲಕರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಹಾಗೂ ಪದಾಧಿಕಾರಿಗಳು,ಕರ್ನಾಟಕ ದಲಿತ ಸಂಘರ್ಷ ಸಮಿತಿ ನಗರ ಗ್ರಾಮ ಸಮಿತಿ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು,ಪಂಚಾಯತು ಸಿಬ್ಬಂದಿಗಳು, ಗೇರುಕಟ್ಟೆ ಸರಕಾರಿ ಪ್ರಾಥಮಿಕ ಶಾಲಾ ಹಾಗೂ ಫ್ರೌಡ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಭಾಗವಹಿಸಿದರು.

Related posts

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya
error: Content is protected !!