ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya


ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 40 ವಿದ್ಯಾರ್ಥಿಗಳು ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆ ಬೆಂಗಳೂರು ನಿಂದ ನಡೆದಂತಹ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಭಾಗವಹಿಸಿ, ಆಷಿಶ್ ಆರ್ ಕಾಮತ್, ಆರುಷಿ ಜೈನ್, ಅನುಶ್ರೀ ಉನ್ನತ ಶ್ರೇಣಿಯನ್ನು ಪಡೆದಿದ್ದು, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ.


ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಸಹಶಿಕ್ಷಕ ಮಂಜುನಾಥ್ ರವರ ಸಹಕಾರದೊಂದಿಗೆ, ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಶ್ರೀಮತಿ ಪ್ರಮೀಳಾ ರವರು ಮಕ್ಕಳನ್ನು ತಯಾರುಗೊಳಿಸಿರುತ್ತಾರೆ.

Leave a Comment

error: Content is protected !!