23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಕ್ಕಡ ವಲಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭವು ಫೆ. 11 ರಂದು ನಡೆಯಿತು.

ಅಧ್ಯಕ್ಷತೆಯನ್ನು ನಿತೇಶ್ ಬಲ್ಲಾಳ ಅನುವಂಶಿಕ ಆಡಳಿತ ಮುಖ್ಯಸ್ಥರು ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿ ಯೋಜನೆಯ ಪ್ರತಿಯೊಂದು ಕಾರ್ಯಕ್ರಮಗಳಿಗೂ ಸಹಕಾರ ನೀಡುವುದಾಗಿ ತಿಳಿಸಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಮತ್ತು ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಸುರೇಶ್ ಮೋಯ್ಲಿ ಅವರು ಯೋಜನೆಯ ಕಾರ್ಯಕ್ರಮಗಳು ಬಡ್ಡಿದರಗಳು ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಉತ್ತಮವಾದ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ಕೊಕ್ಕಡ ಸೇವಾಸಹಕಾರಿ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಒಕ್ಕೂಟ ಅಧ್ಯಕ್ಷ ಆನಂದ ಗೌಡ ಅನಾರು,ಕೊಕ್ಕಡ ವೈದ್ಯನಾಥೆಶ್ವರ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ, ಕೊಕ್ಕಡ ಹಿರಿಯ ವೈದ್ಯರು ಡಾ| ಮೊಹದಾಸ್ ಗೌಡ, ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ದೇರಾಜೆ , ವಲಯ ಒಕ್ಕೂಟ ಅಧ್ಯಕ್ಷ ಸೇಸಪ್ಪಮೂಲ್ಯ, ತಾಲೂಕು ಜನಜಾಗೃತಿ ಸದಸ್ಯರಾದ ಕುಶಾಲಪ್ಪ ಗೌಡ, ಕೊರಗಪ್ಪ ಗೌಡ, ಸುರೇಶ್ ನಲಿಕೆ , ಉಸ್ಮಾನ್, ವಲಯದ ಸೇವಾಪ್ರತಿನಿಧಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ನಿರೂಪಣೆಯನ್ನು ಕೃಷಿ ಮೇಲ್ವಿಚಾರಕ ರಾಮ ಕುಮಾರ ನಿರೂಪಿಸಿ, ಜನಜಾಗೃತಿ ವೇದಿಕೆ ಸದಸ್ಯ ಪ್ರಗಪ್ಪ ಗೌಡ ಕೊಕ್ಕಡ ಧನ್ಯವಾದ ವಿತ್ತರು.

Related posts

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya
error: Content is protected !!