23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

ಬೆಳ್ತಂಗಡಿ :ಸೀರೋ ಮಲಬಾರ್ , ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕ ರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ಇಂದು ಮುಂಜಾನೆ ತೆರಳಿ ಪೂಜಾರ್ಪಣೆ ಯಲ್ಲಿ ಭಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು.

ಇಂದಿನಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ ಆಹಾರವನ್ನು ತ್ಯಜಿಸಿ ಸಂಪೂರ್ಣ ಶಾಖಾಹಾರಿಗಳಾಗಿ ಬದಲಾಗುತ್ತಾರೆ. ಪ್ರತಿ ದಿನ ಪೂಜೆಯಲ್ಲಿ ಭಾಗವಹಿಸಿ ಶಿಲುಬೆಯ ಹಾದಿಯ ಪ್ರಾರ್ಥನೆ ಯನ್ನು, ಮನೆಗಳಲ್ಲಿ ಚರ್ಚ್ ಗಳಲ್ಲಿ ಮಾಡುವುದು ಈ ಸಂದರ್ಭದ ವಿಶೇಷ, ಮಾಡಿದ ತಪ್ಪುಗಳಿಗೆ ಪರಿಹಾರ ಮತ್ತು ಪಾಪ ವಿಮುಕ್ತಿ ಪಡೆಯುವುದು ಈ ವ್ರತಾಚರಣೆಯ ದಿನಗಳ ವಿಶೇಷತೆಯಾಗಿದೆ. ಇಂದಿನಿಂದ ಈಸ್ಟರ್ ವರೆಗಿನ ಐವತ್ತು ದಿನಗಳ ವರೆಗೆ ಈ ವ್ರತಚಾರಣೆ ನಡೆಯಲಿದೆ. ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮ ಗುರುಗಳಾದ ವಂದನಿಯ ಫಾ.ಶಾಜಿ ಮಾತ್ಯು, ಫಾ. ಆಶೀಲ್ ನೇತೃತ್ವ ವಹಿಸಿದರು.

Related posts

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya
error: Content is protected !!