July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

ಬೆಳ್ತಂಗಡಿ :ಸೀರೋ ಮಲಬಾರ್ , ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕ ರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ಇಂದು ಮುಂಜಾನೆ ತೆರಳಿ ಪೂಜಾರ್ಪಣೆ ಯಲ್ಲಿ ಭಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು.

ಇಂದಿನಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ ಆಹಾರವನ್ನು ತ್ಯಜಿಸಿ ಸಂಪೂರ್ಣ ಶಾಖಾಹಾರಿಗಳಾಗಿ ಬದಲಾಗುತ್ತಾರೆ. ಪ್ರತಿ ದಿನ ಪೂಜೆಯಲ್ಲಿ ಭಾಗವಹಿಸಿ ಶಿಲುಬೆಯ ಹಾದಿಯ ಪ್ರಾರ್ಥನೆ ಯನ್ನು, ಮನೆಗಳಲ್ಲಿ ಚರ್ಚ್ ಗಳಲ್ಲಿ ಮಾಡುವುದು ಈ ಸಂದರ್ಭದ ವಿಶೇಷ, ಮಾಡಿದ ತಪ್ಪುಗಳಿಗೆ ಪರಿಹಾರ ಮತ್ತು ಪಾಪ ವಿಮುಕ್ತಿ ಪಡೆಯುವುದು ಈ ವ್ರತಾಚರಣೆಯ ದಿನಗಳ ವಿಶೇಷತೆಯಾಗಿದೆ. ಇಂದಿನಿಂದ ಈಸ್ಟರ್ ವರೆಗಿನ ಐವತ್ತು ದಿನಗಳ ವರೆಗೆ ಈ ವ್ರತಚಾರಣೆ ನಡೆಯಲಿದೆ. ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮ ಗುರುಗಳಾದ ವಂದನಿಯ ಫಾ.ಶಾಜಿ ಮಾತ್ಯು, ಫಾ. ಆಶೀಲ್ ನೇತೃತ್ವ ವಹಿಸಿದರು.

Related posts

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದಲ್ಲಿ ಚಂದ್ರಮಂಡಲ ರಥೋತ್ಸವ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!