September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

ಬೆಳ್ತಂಗಡಿ :ಸೀರೋ ಮಲಬಾರ್ , ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕ ರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ಇಂದು ಮುಂಜಾನೆ ತೆರಳಿ ಪೂಜಾರ್ಪಣೆ ಯಲ್ಲಿ ಭಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು.

ಇಂದಿನಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ ಆಹಾರವನ್ನು ತ್ಯಜಿಸಿ ಸಂಪೂರ್ಣ ಶಾಖಾಹಾರಿಗಳಾಗಿ ಬದಲಾಗುತ್ತಾರೆ. ಪ್ರತಿ ದಿನ ಪೂಜೆಯಲ್ಲಿ ಭಾಗವಹಿಸಿ ಶಿಲುಬೆಯ ಹಾದಿಯ ಪ್ರಾರ್ಥನೆ ಯನ್ನು, ಮನೆಗಳಲ್ಲಿ ಚರ್ಚ್ ಗಳಲ್ಲಿ ಮಾಡುವುದು ಈ ಸಂದರ್ಭದ ವಿಶೇಷ, ಮಾಡಿದ ತಪ್ಪುಗಳಿಗೆ ಪರಿಹಾರ ಮತ್ತು ಪಾಪ ವಿಮುಕ್ತಿ ಪಡೆಯುವುದು ಈ ವ್ರತಾಚರಣೆಯ ದಿನಗಳ ವಿಶೇಷತೆಯಾಗಿದೆ. ಇಂದಿನಿಂದ ಈಸ್ಟರ್ ವರೆಗಿನ ಐವತ್ತು ದಿನಗಳ ವರೆಗೆ ಈ ವ್ರತಚಾರಣೆ ನಡೆಯಲಿದೆ. ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮ ಗುರುಗಳಾದ ವಂದನಿಯ ಫಾ.ಶಾಜಿ ಮಾತ್ಯು, ಫಾ. ಆಶೀಲ್ ನೇತೃತ್ವ ವಹಿಸಿದರು.

Related posts

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!