July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಬಾವಂತಬೆಟ್ಟು ನಿವಾಸಿ ಹಿರಿಯ ಸಹಕಾರಿ ಧುರೀಣ, ಸಹಕಾರ ರತ್ನ ನಿರಂಜನ ಬಾವಂತಬೆಟ್ಟು(75ವ)ರವರು ಇಂದು ಫೆ.12 ರಂದು ನಿಧನರಾಗಿದ್ದಾರೆ.

ಇವರು 1973ರಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕಣಿಯೂರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸುಮಾರು 38 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಅರುಣ, ಮಕ್ಕಳಾದ ಪವಿತ್ರ, ಚೈತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!