April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

ಕುವೆಟ್ಟು: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹೆದ್ದಾರಿಯ ಕೆಲಸ ನಡೆಯುತ್ತಿದ್ದು ಮದ್ದಡ್ಕ ಪೇಟೆಯಲ್ಲಿ ಚರಂಡಿಯ ಕೆಲಸವನ್ನು ಸಂಪೂರ್ಣಗೊಳಿಸದೆ ಕಳೆದ ಒಂದು ತಿಂಗಳ ಹಿಂದೆ ಸ್ತಗಿತಗೊಳಿಸಿದ್ದು ಪೇಟೆಯ ವರ್ತಕರಿಗೆ, ಬ್ಯಾಂಕ್, ಹೋಟೆಲ್ ಇನ್ನಿತರ ವ್ಯಾಪರಸ್ಥರಿಗೆ ಗ್ರಾಹಕರಿಗೆ ಪೇಟೆಯ ಜನತೆಗೆ ಬಹಳ ತೊಂದರೆಯನ್ನು ಅನುಭವಿಸುತ್ತಿದ್ದು ತಕ್ಷಣ ಕಾಮಗಾರಿಯನ್ನು ಪ್ರಾರಂಭ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕ ಮಾಡಿ ತಿಳಿಸಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾರವರಿಗೆ ಮನವಿ ನೀಡುವ ಮೂಲಕ ಫೆ 12 ರಂದು ಒತ್ತಾಯಿಸಲಾಯಿತು.

ತಕ್ಷಣ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಮಾಹಿತಿ ಪಡೆದುಕೊಂಡು 3 ದಿನಗಳಲ್ಲಿ ಮದ್ದಡ್ಕ ಪೇಟೆಯ‌ ಎಲ್ಲಾ ವ್ಯಾಪರಸ್ತರ ಸಭೆಯನ್ನು ಕರೆದು ತೊಂದರೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಅಬ್ಬೋನ್ ಮದ್ದಡ್ಕ. ಶ್ರೀ ದುರ್ಗಾ ಟ್ರೇಡರ್ಸ್ ನ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶೇಖರ್ ಶೆಟ್ಟಿ ಹೋಟೆಲ್ ದತ್ತಗುರು ಮದ್ದಡ್ಕ ವರ್ತಕರ ಸಂಘದ ಸದಸ್ಯರಾದ ವೈ ಕೆ ಸ್ಟೋರ್ ಇದರ ಮಾಲಕ ಯಾಕುಬ್ ಮತ್ತು ಉಮೇಶ್ ಕುಮಾರ್ ಮನು ಸ್ಟುಡಿಯೋ ಮದ್ದಡ್ಕ ಉಪಸ್ಥಿತರಿದ್ದರು.

Related posts

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

Suddi Udaya
error: Content is protected !!