July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

ಕುವೆಟ್ಟು: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹೆದ್ದಾರಿಯ ಕೆಲಸ ನಡೆಯುತ್ತಿದ್ದು ಮದ್ದಡ್ಕ ಪೇಟೆಯಲ್ಲಿ ಚರಂಡಿಯ ಕೆಲಸವನ್ನು ಸಂಪೂರ್ಣಗೊಳಿಸದೆ ಕಳೆದ ಒಂದು ತಿಂಗಳ ಹಿಂದೆ ಸ್ತಗಿತಗೊಳಿಸಿದ್ದು ಪೇಟೆಯ ವರ್ತಕರಿಗೆ, ಬ್ಯಾಂಕ್, ಹೋಟೆಲ್ ಇನ್ನಿತರ ವ್ಯಾಪರಸ್ಥರಿಗೆ ಗ್ರಾಹಕರಿಗೆ ಪೇಟೆಯ ಜನತೆಗೆ ಬಹಳ ತೊಂದರೆಯನ್ನು ಅನುಭವಿಸುತ್ತಿದ್ದು ತಕ್ಷಣ ಕಾಮಗಾರಿಯನ್ನು ಪ್ರಾರಂಭ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕ ಮಾಡಿ ತಿಳಿಸಬೇಕು ಎಂದು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿ ಗೀತಾರವರಿಗೆ ಮನವಿ ನೀಡುವ ಮೂಲಕ ಫೆ 12 ರಂದು ಒತ್ತಾಯಿಸಲಾಯಿತು.

ತಕ್ಷಣ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಮಾಹಿತಿ ಪಡೆದುಕೊಂಡು 3 ದಿನಗಳಲ್ಲಿ ಮದ್ದಡ್ಕ ಪೇಟೆಯ‌ ಎಲ್ಲಾ ವ್ಯಾಪರಸ್ತರ ಸಭೆಯನ್ನು ಕರೆದು ತೊಂದರೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಅಬ್ಬೋನ್ ಮದ್ದಡ್ಕ. ಶ್ರೀ ದುರ್ಗಾ ಟ್ರೇಡರ್ಸ್ ನ ಮಾಲಕ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶೇಖರ್ ಶೆಟ್ಟಿ ಹೋಟೆಲ್ ದತ್ತಗುರು ಮದ್ದಡ್ಕ ವರ್ತಕರ ಸಂಘದ ಸದಸ್ಯರಾದ ವೈ ಕೆ ಸ್ಟೋರ್ ಇದರ ಮಾಲಕ ಯಾಕುಬ್ ಮತ್ತು ಉಮೇಶ್ ಕುಮಾರ್ ಮನು ಸ್ಟುಡಿಯೋ ಮದ್ದಡ್ಕ ಉಪಸ್ಥಿತರಿದ್ದರು.

Related posts

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!