23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

ಕಳಿಯ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ಮಾ.10 ರಂದು ಮುಲ್ಕಿಯ ಭವಾನಿ ಶಂಕರ ಮೈದಾನದಲ್ಲಿ ಜರಗುವ ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶದ ತಯಾರಿ ಬಗ್ಗೆ ಪೂರ್ವಭಾವಿ ಸಭೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆಯಿತು.

ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮತ್ತು ಗ್ರಾಮ ಸಮಿತಿಯ ಅಧ್ಯಕ್ಷ ದಿವಾಕರ ಮೇದಿನ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಬೆಳ್ತಂಗಡಿ ತಾಲೂಕು ಸಂಘದ ಮಾಜಿ ಅಧ್ಯಕ್ಷರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಜಾತ್ರೋತ್ಸವದಲ್ಲಿ ಮತ್ತು ಮಾರ್ಚ್ 10 ರಂದು ನಡೆಯುವ ಬಿಲ್ಲವರ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆ ಮೂಲಕ ಸಂಘಟನೆ ಶಕ್ತಿಯನ್ನು ಪ್ರದರ್ಶಿಸಬೇಕೆಂದು ಕರೆ ನೀಡಿದರು.

ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಉಪಾಧ್ಯಕ್ಷ , ಶೇಖರ ಬಂಗೇರ, ಕಾರ್ಯಕಾರಿ ಸಮಿತಿ ಸದಸ್ಯೆ ಶ್ರೀಮತಿ ವಿನೋಧಿನಿ ರಾಮಪ್ಪ, ಸುರೇಶ ಬಂಗೇರ ಮೆದಿನಾ, ಶ್ರೀಮತಿ ಶ್ವೇತಾ, ಶ್ರೀಮತಿ ಭಾಗ್ಯ, ಶ್ರೀಮತಿ ಪ್ರಮೀಳಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪೂರ್ಣಿಮಾ, ಶ್ರೀಮತಿ ಮೋಹಿನಿ, ಶ್ರೀಮತಿ ವಸಂತಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು., ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ತಂಗಡಿ ತಾಲೂಕಿನ ಸಂಚಾಲಕಿ , ಶ್ರೀಮತಿ ಶಾಂತ ಬಂಗೇರ ರವರು ಪ್ರಸ್ತಾವಿಸಿ ಮಾ.10 ರಂದು ಮೂಲ್ಕಿಯಲ್ಲಿ ನಡೆಯುವ ಐತಿಹಾಸಿಕ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಲು ಕರೆ ನೀಡಿದರು.


ಕಳಿಯ ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಮಧ್ವರಾಜ್ ಸ್ವಾಗತಿಸಿದರು. ಶ್ರೀಮತಿ ಕುಸುಮಾವತಿ ಬಂಗೇರ ಧನ್ಯವಾದ ಸಮರ್ಪಿಸಿದರು.

Related posts

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!