ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಉಜಿರೆ: ಧಾರವಾಡದ ಜೆ.ಎಸ್.ಎಸ್.ವಿದ್ಯಾಸಂಸ್ಥೆ ಯಲ್ಲಿ  ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಧರ್ಮಸ್ಥಳದ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಮಂಗಳೂರಿನ ವಿದುಷಿ ಸುಮಂಗಲಾ ರತ್ನಾಕರ್ ರಾವ್ ಇವರ ಶಿಷ್ಯೆಯಾಗಿರುವ ಇವರು, ಉಜಿರೆಯ ಪತ್ರಿಕೆ ವಿತರಕ, ಕಲ್ಮಂಜದ ಧನಂಜಯ ಭಿಡೆ ಹಾಗೂ ಚಿತ್ರಾ ದಂಪತಿಯ ಪುತ್ರಿ.

Leave a Comment

error: Content is protected !!