ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಬಂದಾರು : ರಾಜ್ಯಮಟ್ಟದ ಪ್ರತಿಭಾ ಕಾರಂಜಿ 2023-24 ಸಾಲಿನ ಪದ್ಯ /ಕವನ ವಾಚನ ಸ್ಪರ್ಧೆಯಲ್ಲಿ 3 ನೇ ಸಮಾಧಾನಕರ ಪಡೆದುಕೊಂಡಿರುತ್ತಾರೆ ಕು | ನಿತ್ಯಶ್ರೀ ಖಂಡಿಗ ಬಂದಾರು.

ಬಂದಾರು : ಫೆ 08,09 ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ, ಇಲಾಖೆ, ಬೆಂಗಳೂರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಇವುಗಳ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ 2023-24 ಕವನ ವಾಚನ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯ 9 ತರಗತಿ ವಿದ್ಯಾರ್ಥಿನಿ ಕು|ನಿತ್ಯಶ್ರೀ. ಖಂಡಿಗ. 3 ನೇ ಸಮಾಧಾನಕರ ಪ್ರಶಸ್ತಿ ಪಡೆದಿರುತ್ತಾಳೆ.

ಇವಳು ಬಂದಾರು ಗ್ರಾಮದ ಮೈರೋಳ್ತಡ್ಕ ಖಂಡಿಗ ನಿವಾಸಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರ ಸಹೋದರ ದಿ|ಸಂಜೀವ ಗೌಡ ಮತ್ತು ಶ್ರೀಮತಿ ಮೋಹಿನಿ ದಂಪತಿಯ ಪುತ್ರಿ .

Leave a Comment

error: Content is protected !!