25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

ಬೆಳ್ತಂಗಡಿ :ಸೀರೋ ಮಲಬಾರ್ , ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕ ರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ಇಂದು ಮುಂಜಾನೆ ತೆರಳಿ ಪೂಜಾರ್ಪಣೆ ಯಲ್ಲಿ ಭಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು.

ಇಂದಿನಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ ಆಹಾರವನ್ನು ತ್ಯಜಿಸಿ ಸಂಪೂರ್ಣ ಶಾಖಾಹಾರಿಗಳಾಗಿ ಬದಲಾಗುತ್ತಾರೆ. ಪ್ರತಿ ದಿನ ಪೂಜೆಯಲ್ಲಿ ಭಾಗವಹಿಸಿ ಶಿಲುಬೆಯ ಹಾದಿಯ ಪ್ರಾರ್ಥನೆ ಯನ್ನು, ಮನೆಗಳಲ್ಲಿ ಚರ್ಚ್ ಗಳಲ್ಲಿ ಮಾಡುವುದು ಈ ಸಂದರ್ಭದ ವಿಶೇಷ, ಮಾಡಿದ ತಪ್ಪುಗಳಿಗೆ ಪರಿಹಾರ ಮತ್ತು ಪಾಪ ವಿಮುಕ್ತಿ ಪಡೆಯುವುದು ಈ ವ್ರತಾಚರಣೆಯ ದಿನಗಳ ವಿಶೇಷತೆಯಾಗಿದೆ. ಇಂದಿನಿಂದ ಈಸ್ಟರ್ ವರೆಗಿನ ಐವತ್ತು ದಿನಗಳ ವರೆಗೆ ಈ ವ್ರತಚಾರಣೆ ನಡೆಯಲಿದೆ. ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮ ಗುರುಗಳಾದ ವಂದನಿಯ ಫಾ.ಶಾಜಿ ಮಾತ್ಯು, ಫಾ. ಆಶೀಲ್ ನೇತೃತ್ವ ವಹಿಸಿದರು.

Related posts

ನೆರಿಯದಲ್ಲಿ ಅಟಲ್ ವಿರಾಸತ್ ಜನ್ಮ ಶತಾಬ್ದಿ ಪ್ರಯುಕ್ತ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಂದ ಕಿಟ್ ವಿತರಣೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya
error: Content is protected !!