25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ತಾಲೂಕು ಕಾರ್ಯಕಾರಿ ಸಮಿತಿ ಸಭೆ ಹಾಗೂ ವಲಯವಾರು ಸಾಧನಾ ವರದಿ ಪ್ರಸ್ತುತಿ ಕಾರ್ಯಕ್ರಮ ಫೆ.13 ರಂದು ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ವಹಿಸಿದ್ದರು.
ಉದ್ಘಾಟನೆಯನ್ನು ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್ ಕಾಪಿನಡ್ಕ ನೆರವೇರಿಸಿದರು.
ವೇದಿಕೆಯಲ್ಲಿ‌ ವೇದಿಕೆಯ ಪೂರ್ವಾಧ್ಯಕ್ಷರುಗಳಾದ ಬೆಳಾಲು ತಿಮ್ಮಪ್ಪ ಗೌಡ, ಡಿ.ಎ ರಹಿಮಾನ್, ಪಿ.ಕೆ ರಾಜು ಪೂಜಾರಿ, ಶಾರದಾ ಆರ್ ರೈ, ಅಡೂರು ವೆಂಕಟ್ರಾಯ ಉಪಸ್ಥಿತರಿದ್ದರು.
ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಿಸ್ ಮುಂದಿನ ಯೋಜನಾ ಗುರಿ ಮತ್ತು ಕಾರ್ಯಯೋಜನೆಯ ಬಗ್ಗೆ ವಿವರಣೆ ನೀಡಿದರು. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹಾಜರಿದ್ದರು.

ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ, ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಕಾರ್ಯಕ್ರಮ ಸಂಯೋಜಿಸಿದರು.

ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ವರದಿಯನ್ನು ಮೇಲ್ವಿಚಾರಕಿ ವಿದ್ಯಾ ಮತ್ತು ಜ್ಞಾನ ವಿಕಾಸ ಕಾರ್ಯಕ್ರಮಗಳ ಮೇಲ್ವಿಚಾರಕಿ ಮಧುರಾ ಪ್ರಗತಿವರದಿ ಮಂಡಿಸಿದರು.
ಕೃಷಿ ಮೇಲ್ವಿಚಾರಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya
error: Content is protected !!