27.1 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ತಾಲೂಕು ಕಾರ್ಯಕಾರಿ ಸಮಿತಿ ಸಭೆ ಹಾಗೂ ವಲಯವಾರು ಸಾಧನಾ ವರದಿ ಪ್ರಸ್ತುತಿ ಕಾರ್ಯಕ್ರಮ ಫೆ.13 ರಂದು ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ವಹಿಸಿದ್ದರು.
ಉದ್ಘಾಟನೆಯನ್ನು ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್ ಕಾಪಿನಡ್ಕ ನೆರವೇರಿಸಿದರು.
ವೇದಿಕೆಯಲ್ಲಿ‌ ವೇದಿಕೆಯ ಪೂರ್ವಾಧ್ಯಕ್ಷರುಗಳಾದ ಬೆಳಾಲು ತಿಮ್ಮಪ್ಪ ಗೌಡ, ಡಿ.ಎ ರಹಿಮಾನ್, ಪಿ.ಕೆ ರಾಜು ಪೂಜಾರಿ, ಶಾರದಾ ಆರ್ ರೈ, ಅಡೂರು ವೆಂಕಟ್ರಾಯ ಉಪಸ್ಥಿತರಿದ್ದರು.
ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಿಸ್ ಮುಂದಿನ ಯೋಜನಾ ಗುರಿ ಮತ್ತು ಕಾರ್ಯಯೋಜನೆಯ ಬಗ್ಗೆ ವಿವರಣೆ ನೀಡಿದರು. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹಾಜರಿದ್ದರು.

ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ, ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಕಾರ್ಯಕ್ರಮ ಸಂಯೋಜಿಸಿದರು.

ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ವರದಿಯನ್ನು ಮೇಲ್ವಿಚಾರಕಿ ವಿದ್ಯಾ ಮತ್ತು ಜ್ಞಾನ ವಿಕಾಸ ಕಾರ್ಯಕ್ರಮಗಳ ಮೇಲ್ವಿಚಾರಕಿ ಮಧುರಾ ಪ್ರಗತಿವರದಿ ಮಂಡಿಸಿದರು.
ಕೃಷಿ ಮೇಲ್ವಿಚಾರಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ