ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಸಹಕಾರ ರತ್ನ , ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ನಿರ್ದೇಶಕರು, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು ,ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಬಿ.ನಿರಂಜನ್ ಬಾವಂತಬೆಟ್ಟು ರವರು ಅಲ್ಪಕಾಲದ ಅನಾರೋಗ್ಯ ದಿಂದ ಅಗಲಿದ್ದು ಇವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಸಭಾಂಗಣದಲ್ಲಿ ಫೆ.13ರಂದು ಶ್ರದ್ಧಾಂಜಲಿ ಸಭೆ ನಡೆಯಿತು.
ಲಕ್ಷಣ ಗೌಡ ಬಂಗಾಡಿ ನುಡಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಣ ,ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಮುಖಂಡರಾದ ಲೋಕೆಶ್ವರಿ ವಿನಯಚಂದ್ರ ಗೌಡ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಧರಣೇಂದ್ರ ಕುಮಾರ್ , ಶೇಖರ್ ಕುಕ್ಕೇಡಿ, ನಮಿತಾ ಕೆ ಪೂಜಾರಿ , ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಭಗೀರಥ ಜಿ , ಭೂ ನ್ಯಾಯ ಮಂಡಳಿ ಸದಸ್ಯರಾದ ಬೊಮ್ಮಣ್ಣ ಗೌಡ ಪುದುವೆಟ್ಟು, ಇಸ್ಮಾಯಿಲ್ ಪೆರಿಂಜೆ, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಆಯುಬ್ ಡಿ ಕೆ, ಜಿಲ್ಲಾ ಆರೋಗ್ಯ ರಕ್ಷ ಸಮಿತಿಯ ಸದಸ್ಯರಾದ ಕರೀಮ್ ಗೇರುಕಟ್ಟೆ, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಸುಭಾಷ್ ಚಂದ್ರ ರೈ ,ಮಡಂತ್ಯಾರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅರವಿಂದ್ ಜೈನ್ , ಇಳಂತಿಲ ಗ್ರಾಮ ಪಂಚಾಯತ್ ಸದಸ್ಯರಾದ ಇಸುಬು ಯು.ಕೆ ಹಾಗೂ ಪ್ರಮುಖರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಆಶ್ರಪ್ ನೆರಿಯ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!