22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

ವೇಣೂರು: ಇಲ್ಲಿಯ ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಮತ್ತು ತಾಲೂಕು ಅಮೆಚೂರ್ ಕಬಡ್ಡಿ ಸಂಸ್ಥೆಯ ಸಹಭಾಗಿತ್ವದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಫೆ.10 ರಂದು ಗುಂಡೂರಿ ತುಂಬೆದಲೆಕ್ಕಿ ಶ್ರೀ ಸತ್ಯ ನಾರಾಯಣ ಭಜನಾ ಮಂದಿರದ ಸಮೀಪ ನಡೆಯಿತು.

ಕಾರ್ಯಕ್ರಮವನ್ನು ಲಕ್ಷ್ಮಿ ನಾರಾಯಣ ಅಸ್ರಣ್ಣರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.

ಅಧ್ಯಕ್ಷತೆಯನ್ನು ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸಂದೀಪ್ ಕುಮಾರ್ ಪಾದೆಗುರಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಸತ್ಯನಾರಾಯಣ ಭಜನಾ ಮಂಡಳಿ ಅಧ್ಯಕ್ಷ ರಮೇಶ್ ಪಡ್ಡಾಯಿಮಜಲು, ಶ್ರೀಕಾಂತ್ ಭಟ್ ನಂದಳಿಕೆ, ಪ್ರಮುಖರಾದ ಜಯಂತ್ ಕೋಟ್ಯಾನ್, ಹರೀಶ್ ಪೊಕ್ಕಿ, ವಿಜಯ್ ಗೌಡ,ಲೋಕೇಶ್ ಕೊರ್ಲೋಡಿ, ನವೀನ್ ಪಚ್ಚೇರಿ ಮೊದಲಾದವರು ಉಪಸ್ಥಿತರಿದ್ದರು.

ಕಂಬಳದ ಕೋಣಕ್ಕೆ ಹಾಗೂ ಸಾಧಕರಿಗೆ ಸನ್ಮಾನ; ಕಾರ್ಯಕ್ರಮದಲ್ಲಿ ಗುಂಡೂರಿ ಗ್ರಾಮದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು, ಯುನಿರ್ವಸಿಟಿ ಗೋಲ್ಡ್ ಮೆಡಲಿಸ್ಟ್ ಕಬಡ್ಡಿ ಆಟಗಾರರಾದ ಸುಶಾಂತ್ ಶೆಟ್ಟಿ ಗರ್ಡಾಡಿ, ಪ್ರಜ್ವಲ್ ಶಿವಮೊಗ್ಗ , ಶಶಾಂಕ್ ಕುಮಾರ್, ಹೊನ್ನಯ್ಯ ಗುಂಡೂರಿ ಹಾಗೂ ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ ನಡೆಯಿತು.

ಉಪಾಧ್ಯಕ್ಷ ನಿತೀಶ್ ಗುಂಡೂರಿ ಹಾಗೂ ಸಮಿತಿ ಸದಸ್ಯರು ಸಹಕರಿಸಿದರು. ಕಾರ್ಯದರ್ಶಿ ದಯಾನಂದ ಗುಂಡೂರಿ ಪ್ರಾಸ್ತಾವಿಕ ಮಾತನಾಡಿದರು. ಸುಧಾಕರ ಭಟ್ ಸ್ವಾಗತಿಸಿದರು.

Related posts

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!