April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ತಾಲೂಕು ಕಾರ್ಯಕಾರಿ ಸಮಿತಿ ಸಭೆ ಹಾಗೂ ವಲಯವಾರು ಸಾಧನಾ ವರದಿ ಪ್ರಸ್ತುತಿ ಕಾರ್ಯಕ್ರಮ ಫೆ.13 ರಂದು ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ವಹಿಸಿದ್ದರು.
ಉದ್ಘಾಟನೆಯನ್ನು ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್ ಕಾಪಿನಡ್ಕ ನೆರವೇರಿಸಿದರು.
ವೇದಿಕೆಯಲ್ಲಿ‌ ವೇದಿಕೆಯ ಪೂರ್ವಾಧ್ಯಕ್ಷರುಗಳಾದ ಬೆಳಾಲು ತಿಮ್ಮಪ್ಪ ಗೌಡ, ಡಿ.ಎ ರಹಿಮಾನ್, ಪಿ.ಕೆ ರಾಜು ಪೂಜಾರಿ, ಶಾರದಾ ಆರ್ ರೈ, ಅಡೂರು ವೆಂಕಟ್ರಾಯ ಉಪಸ್ಥಿತರಿದ್ದರು.
ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಿಸ್ ಮುಂದಿನ ಯೋಜನಾ ಗುರಿ ಮತ್ತು ಕಾರ್ಯಯೋಜನೆಯ ಬಗ್ಗೆ ವಿವರಣೆ ನೀಡಿದರು. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹಾಜರಿದ್ದರು.

ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ, ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಕಾರ್ಯಕ್ರಮ ಸಂಯೋಜಿಸಿದರು.

ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ವರದಿಯನ್ನು ಮೇಲ್ವಿಚಾರಕಿ ವಿದ್ಯಾ ಮತ್ತು ಜ್ಞಾನ ವಿಕಾಸ ಕಾರ್ಯಕ್ರಮಗಳ ಮೇಲ್ವಿಚಾರಕಿ ಮಧುರಾ ಪ್ರಗತಿವರದಿ ಮಂಡಿಸಿದರು.
ಕೃಷಿ ಮೇಲ್ವಿಚಾರಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya
error: Content is protected !!