25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

ಬೆಳ್ತಂಗಡಿ : ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಇದರ ನೂತನ ಅಧ್ಯಕ್ಷರಾಗಿ ಪಿ.ಎಲ್.ಡಿ ಬ್ಯಾಂಕ್ ನ ನಿವೃತ್ತ ಮೆನೇಜರ್ ವೆಂಕಪ್ಪಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.


ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ ಅಧ್ಯಕ್ಷತೆಯಲ್ಲಿ ತಾಲೂಕು ಸಮಿತಿ ಸಭೆ ನಡೆಯಿತು.
ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಬಿ. ಸುಧಾಕರ್ ರೈ ಬೋಳಂತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣಪ್ರಕಾಶ್ ಕೆ., ಜಿಲ್ಲಾ ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್ ಭಾಗವಹಿಸಿ ಸಂಘಟನಾತ್ಮಕ ಮಾಹಿತಿ ನೀಡಿದರು.


ನೂತನ ತಾಲೂಕು‌ ಕಾರ್ಯಕಾರಿ ಸಮಿತಿ ರಚನೆ, ಅಭ್ಯಾಸವರ್ಗ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕೆ.ಎಂ.ಎಫ್ ನಿರ್ದೇಶಕ ಪದ್ಮನಾಭ ಅರ್ಕಜೆ, ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ ರಾವ್, ಕೊಕ್ಕಡ ಸಿಎ ಬ್ಯಾಂಕ್ ಅಧ್ಯಕ್ಷ ಕುಶಾಲಪ್ಪ ಗೌಡ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ನಿಡ್ಲೆ ಸಿಎ ಬ್ಯಾಂಕ್ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಆರಿಗಾ, ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ಉಪಾಧ್ಯಕ್ಷ ಸದಾನಂದ ಗೌಡ, ಗುರುವಾಯನಕೆರೆ ಸಿಎ ಬ್ಯಾಂಕ್ ಉಪಾಧ್ಯಕ್ಷ ವಡಿವೇಲು, ದಯಾನಂದ ಕರ್ಕೇರ ಉಪಸ್ಥಿತರಿದ್ದರು.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya
error: Content is protected !!