September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಸಂವಿಧಾನ ಜಾಗೃತಿ ಜಾಥ

ಲಾಯಿಲ : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ ” ವು ಫೆ. 11 ರಂದು ಲಾಯಿಲ ಗ್ರಾಮದ ಲಾಯಿಲ ಜಂಕ್ಷನ್ ಬಳಿಯಿಂದ ಗ್ರಾಮ ಪಂಚಾಯಿತಿ ವರೆಗೆ ಕರ್ನೋಡಿ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನೊಂದಿಗೆ ಕಾಲ್ನಡಿಗೆ ಮೆರವಣಿಗೆ ಜಾಥಾ ಮೂಲಕ ಬರಮಾಡಿಕೊಳ್ಳಲಾಯಿತು.

ನಂತರ ಗ್ರಾಮ ಪಂಚಾಯತ್ ಕಛೇರಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ ಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ದಲಿತ ಮುಖಂಡರಾದ ಶೇಖರ್ ಲಾಯಿಲ ಅವರು ಸಂವಿಧಾನ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿದರು ಮತ್ತು ತನ್ನ ಸೊಸೆಯ ಮದುವೆಯ ಅಂಗವಾಗಿ ಮೂರು ಸರ್ಕಾರಿ ಶಾಲೆಗಳಿಗೆ “ಸಂವಿಧಾನ ಓದು” ಪುಸ್ತಕವನ್ನು ನೀಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಸುಗಂಧಿ ಜಗನ್ನಾಥ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ರತ್ನಾವತಿ, ಹಿ. ಪ್ರಾ. ಶಾಲೆ ಕರ್ನೋಡಿ ಲಾಯಿಲ ಮುಖ್ಯೋಪಾಧ್ಯಾಯರು ಜಗನ್ನಾಥ ಎಂ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ದಲಿತ ಮುಖಂಡ ಜಗನ್ನಾಥ ಲಾಯಿಲ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.


ಗ್ರಾಮ ಪಂಚಾಯತಿ ಲೆಕ್ಕ ಸಹಾಯಕರಾದ ಸುಪ್ರೀತಾ ಎಸ್ ಶೆಟ್ಟಿ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು, ಕಾರ್ಯಕ್ರಮದಲ್ಲಿ ಸಂವಿಧಾನ ಕುರಿತಾದ ಭಾಷಣ & ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya
error: Content is protected !!