ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

Updated on:

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದಕ್ಕೆ ನಡೆದ 5ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ 12 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದು ಮುಂದಿನ ಸಾಲಿನ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ ಹಾಗೂ ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ನಿರ್ದೇಶಕರಾಗಿ ಜಯರಾಜ್ ಜೈನ್, ಶ್ರೀಮತಿ ಆರತಿ, ಪರಮೇಶ್ ಟಿ, ಚಂದ್ರಶೇಖರ್, ಅಬ್ದುಲ್ ರಜಾಕ್, ಹರಿಪ್ರಸಾದ್ , ಶ್ರೀಮತಿ ಹೇಮಲತಾ, ಶ್ರೀಮತಿ ರತ್ನಾವತಿ, ಪ್ರಶಾಂತ್ ಕುಮಾರ್, ಶ್ರೀಮತಿ ವಾರಿಜ ಕೆ., ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಶ್ರೀಮತಿ ಬಿ.ವಿ ಪ್ರತಿಮಾ ಸಹಕಾರ ಅಭಿವೃದ್ಧಿ ಅಧಿಕಾರಿ ಬೆಳ್ತಂಗಡಿಯವರು ಸಹಕರಿಸಿದರು.

Leave a Comment

error: Content is protected !!