April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.13 ರಿಂದ ಪ್ರಾರಂಭಗೊಂಡು ಫೆ.22 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಇಂದು ಬೆಳಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭೀಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ನಂತರ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು, ಹಾಗೂ ಕುಟುಂಬಸ್ಥರು, ಅರ್ಚಕ ವೃಂದ, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya
error: Content is protected !!