24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.13 ರಿಂದ ಪ್ರಾರಂಭಗೊಂಡು ಫೆ.22 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಇಂದು ಬೆಳಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭೀಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ನಂತರ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು, ಹಾಗೂ ಕುಟುಂಬಸ್ಥರು, ಅರ್ಚಕ ವೃಂದ, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!