22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.13 ರಿಂದ ಪ್ರಾರಂಭಗೊಂಡು ಫೆ.22 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಇಂದು ಬೆಳಗ್ಗೆ ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಸಮುಚ್ಚಯದ ಭ| ಶ್ರೀ ಶಾಂತಿನಾಥ ಸ್ವಾಮಿ, ಭ| ಶ್ರೀ ಅನಂತನಾಥ ಸ್ವಾಮಿ, ಭ| ಶ್ರೀ ಚಂದ್ರನಾಥ ಸ್ವಾಮಿ, ಭ| ಶ್ರೀಪಾರ್ಶ್ವನಾಥ ಸ್ವಾಮಿ ದೇವರಿಗೆ “ಕ್ಷೀರಾಭೀಷೇಕ”, ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ಹಾಗೂ ಬ್ರಹ್ಮದೇವರಿಗೆ “ಮಹಾಪೂಜೆ” ನಡೆಯಿತು.

ನಂತರ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ಸನ್ನಿಧಾನದಲ್ಲಿ ಬೆಳಗ್ಗೆ ಪ್ರಶ್ನಾಚಿಂತನ, ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ ಬಳಿಕ ಪ್ರಸನ್ನ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ಜಯವರ್ಮರಾಜ ಬಳ್ಳಾಲ್ ಕೆಲ್ಲಗುತ್ತು ಸಬ್ರಬೈಲು, ಹಾಗೂ ಕುಟುಂಬಸ್ಥರು, ಅರ್ಚಕ ವೃಂದ, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya
error: Content is protected !!