37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

ಉಜಿರೆ : ವೈದ್ಯಕೀಯ ಸೇವೆಯಲ್ಲಿ ಜನಮೆಚ್ಚುಗೆ ಪಡೆದ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ಬಡ, ಮಧ್ಯಮ ಹಾಗೂ ಎಲ್ಲಾ ವರ್ಗ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಹರ್ಷೆಂದ್ರ ಕುಮಾರ್ ಅವರ ಸಹಕಾರದಲ್ಲಿ ಲಕ್ಷಾಂತರ ಮಂದಿಗೆ ಅತೀ ಕಡಿಮೆ ದರದಲ್ಲಿ ಚಿಕಿತ್ಸೆ ಹಾಗೂ ಸಾವಿರಾರು ಮಂದಿಗೆ ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ರಿಯಾಯತಿ ದರದಲ್ಲಿ ಮಾಡುವ ಮೂಲಕ ಗ್ರಾಮೀಣ ಜನತೆಯ ಆರೋಗ್ಯ ಕಾಪಾಡುವಲ್ಲಿ ಸದಾ ಶ್ರಮಿಸುತ್ತಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.


ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ. ೧೧ರಂದು ದುರ್ಗಾ ಪೂಜೆ ಹಾಗೂ ಧನ್ವಂತರಿ ಪೂಜೆಯ ಬಳಿಕ ಮಾತನಾಡುತ್ತಾ, ಧನ್ವಂತರಿ ಆರಾಧನೆಯಿಂದ ಆರೋಗ್ಯ ವೃದ್ಧಿಸುತ್ತದೆ. ಊರಿನ ಜನತೆ ಆರೋಗ್ಯವಂತರಾಗಿ ಸುಖ ಶಾಂತಿ ನೆಮ್ಮದಿಯೊಂದಿಗೆ ಜೀವನ ನಡೆಸುವಂತಾಗಲಿ. ನಮ್ಮ ವೈದ್ಯಕೀಯ ಸೇವೆಯಿಂದ ಜನ ತೃಪ್ತರಾಗಿರುವುದು ನಮಗೆ ಖುಷಿ ಕೊಟ್ಟಿದೆ. ಇದೇ ರೀತಿಯ ಉತ್ತಮ ಸೇವೆ ನೀಡಲು ಭಗವಂತನ ಅನುಗ್ರಹ ಸದಾ ಇರಲಿ ಎಂಬ ಸದಾಶಯದೊಂದಿಗೆ ರೋಗಿಗಳ ಹಿತದೃಷ್ಟಿಯಿಂದ ಈ ಪೂಜೆಯನ್ನು ನಡೆಸಲಾಗಿದೆ ಎಂದರು.


ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೇವೇಂದ್ರ ಕುಮಾರ್, ವೈದ್ಯಾಧಿಕಾರಿ ಡಾ. ಸಾತ್ವಿಕ್ ಜೈನ್, ಆಸ್ಪತ್ರೆಯ ವೈದ್ಯರು, ಹಾಗೂ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya
error: Content is protected !!