24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಅರಸಿನಮಕ್ಕಿ: ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ನೆರವೇರಿಸಿ ಶುಭ ಹಾರೈಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ ಉಪಸ್ಥಿತರಿದ್ದು ಮಾತನಾಡಿ 2009ರಲ್ಲಿ ಈ ಕಾಲೇಜಿನ ಪ್ರಿನ್ಸಿಪಾಲ್ ಆಗಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿತ್ತು. ಆಗಲೇ ಹೊಸ ಕಟ್ಟಡದ ಅವಶ್ಯಕತೆ ಕಾಡುತ್ತಿತ್ತು. ಈಗ ಅದು ನೆರವೇರತ್ತಿರುವುದು ತುಂಬಾ ಸಂತಸವಾಗುತ್ತಿದೆ. ಒಳ್ಳೆಯ ಕಟ್ಟಡ ನಿರ್ಮಾಣವಾಗಿ ಇನ್ನಷ್ಟು ಮಕ್ಕಳು ವಿದ್ಯಾಭ್ಯಾಸ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.


ಪಂಚಾಯತ್‌ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ ಎಸ್ ಮಾತನಾಡಿ ಕಾಲೇಜಿಗೆ ಕೊಠಡಿ ಅವಶ್ಯಕತೆ ಮೊದಲಿಂದಲೂ ಇತ್ತು. ಶಾಸಕರ ಪ್ರಯತ್ನದಿಂದ ರೂ. 55 ಲಕ್ಷ ಅನುದಾನ ದೊರೆತಿದ್ದು ಅನುಕೂಲವಾಯಿತು. ಇನ್ನು ಹೈಸ್ಕೂಲ್ ಗೆ ಕೂಡ ಕೊಠಡಿ ಅವಶ್ಯಕತೆ ಬಹಳ ಇದ್ದು ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.


ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ರಾಘವೇಂದ್ರ ನಾಯಕ್‌ ಮಾತನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್‌ ಸದಸ್ಯರಾದ ವಾಮನ ತಾಮನ್ನ‌ರ್, ಅರಿಕೆಗುಡ್ಡೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಗಣೇಶ್ ಕೆ ಹೊಸ್ತೋಟ, ಹತ್ಯಡ್ಕ ಪ್ರಾ.ಕೃ.ಪ.ಸ.ಸ ನಿರ್ದೇಶಕರಾದ ಮುರಳಿಧರ್ ಶೆಟ್ಟಿಗಾ‌ರ್, ವೃಶಾಂಕ್ ಖಾಡಿಲ್ಕರ್, ಕಾಲೇಜು ಪ್ರಿನ್ಸಿಪಾಲ್ ರಾಮಯ್ಯ ಶೆಟ್ಟಿ, ಹೈಸ್ಕೂಲ್ ಮುಖ್ಯಗುರುಗಳಾದ ಚಂದ್ರು, ಕಾಲೇಜು ಉಪನ್ಯಾಸಕರುಗಳು, ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ರಾಮಯ್ಯ ಶೆಟ್ಟಿ ಸ್ವಾಗತಿಸಿ , ರಾಘವೇಂದ್ರ ನಾಯಕ್ ಧನ್ಯವಾದವಿತ್ತರು.

Related posts

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya
error: Content is protected !!