25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಅರಸಿನಮಕ್ಕಿ: ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ನೆರವೇರಿಸಿ ಶುಭ ಹಾರೈಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ ಉಪಸ್ಥಿತರಿದ್ದು ಮಾತನಾಡಿ 2009ರಲ್ಲಿ ಈ ಕಾಲೇಜಿನ ಪ್ರಿನ್ಸಿಪಾಲ್ ಆಗಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿತ್ತು. ಆಗಲೇ ಹೊಸ ಕಟ್ಟಡದ ಅವಶ್ಯಕತೆ ಕಾಡುತ್ತಿತ್ತು. ಈಗ ಅದು ನೆರವೇರತ್ತಿರುವುದು ತುಂಬಾ ಸಂತಸವಾಗುತ್ತಿದೆ. ಒಳ್ಳೆಯ ಕಟ್ಟಡ ನಿರ್ಮಾಣವಾಗಿ ಇನ್ನಷ್ಟು ಮಕ್ಕಳು ವಿದ್ಯಾಭ್ಯಾಸ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.


ಪಂಚಾಯತ್‌ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ ಎಸ್ ಮಾತನಾಡಿ ಕಾಲೇಜಿಗೆ ಕೊಠಡಿ ಅವಶ್ಯಕತೆ ಮೊದಲಿಂದಲೂ ಇತ್ತು. ಶಾಸಕರ ಪ್ರಯತ್ನದಿಂದ ರೂ. 55 ಲಕ್ಷ ಅನುದಾನ ದೊರೆತಿದ್ದು ಅನುಕೂಲವಾಯಿತು. ಇನ್ನು ಹೈಸ್ಕೂಲ್ ಗೆ ಕೂಡ ಕೊಠಡಿ ಅವಶ್ಯಕತೆ ಬಹಳ ಇದ್ದು ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.


ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ರಾಘವೇಂದ್ರ ನಾಯಕ್‌ ಮಾತನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್‌ ಸದಸ್ಯರಾದ ವಾಮನ ತಾಮನ್ನ‌ರ್, ಅರಿಕೆಗುಡ್ಡೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಗಣೇಶ್ ಕೆ ಹೊಸ್ತೋಟ, ಹತ್ಯಡ್ಕ ಪ್ರಾ.ಕೃ.ಪ.ಸ.ಸ ನಿರ್ದೇಶಕರಾದ ಮುರಳಿಧರ್ ಶೆಟ್ಟಿಗಾ‌ರ್, ವೃಶಾಂಕ್ ಖಾಡಿಲ್ಕರ್, ಕಾಲೇಜು ಪ್ರಿನ್ಸಿಪಾಲ್ ರಾಮಯ್ಯ ಶೆಟ್ಟಿ, ಹೈಸ್ಕೂಲ್ ಮುಖ್ಯಗುರುಗಳಾದ ಚಂದ್ರು, ಕಾಲೇಜು ಉಪನ್ಯಾಸಕರುಗಳು, ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ರಾಮಯ್ಯ ಶೆಟ್ಟಿ ಸ್ವಾಗತಿಸಿ , ರಾಘವೇಂದ್ರ ನಾಯಕ್ ಧನ್ಯವಾದವಿತ್ತರು.

Related posts

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

Suddi Udaya

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya
error: Content is protected !!