23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಅರಸಿನಮಕ್ಕಿ: ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ನೆರವೇರಿಸಿ ಶುಭ ಹಾರೈಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ ಉಪಸ್ಥಿತರಿದ್ದು ಮಾತನಾಡಿ 2009ರಲ್ಲಿ ಈ ಕಾಲೇಜಿನ ಪ್ರಿನ್ಸಿಪಾಲ್ ಆಗಿ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿತ್ತು. ಆಗಲೇ ಹೊಸ ಕಟ್ಟಡದ ಅವಶ್ಯಕತೆ ಕಾಡುತ್ತಿತ್ತು. ಈಗ ಅದು ನೆರವೇರತ್ತಿರುವುದು ತುಂಬಾ ಸಂತಸವಾಗುತ್ತಿದೆ. ಒಳ್ಳೆಯ ಕಟ್ಟಡ ನಿರ್ಮಾಣವಾಗಿ ಇನ್ನಷ್ಟು ಮಕ್ಕಳು ವಿದ್ಯಾಭ್ಯಾಸ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.


ಪಂಚಾಯತ್‌ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ ಎಸ್ ಮಾತನಾಡಿ ಕಾಲೇಜಿಗೆ ಕೊಠಡಿ ಅವಶ್ಯಕತೆ ಮೊದಲಿಂದಲೂ ಇತ್ತು. ಶಾಸಕರ ಪ್ರಯತ್ನದಿಂದ ರೂ. 55 ಲಕ್ಷ ಅನುದಾನ ದೊರೆತಿದ್ದು ಅನುಕೂಲವಾಯಿತು. ಇನ್ನು ಹೈಸ್ಕೂಲ್ ಗೆ ಕೂಡ ಕೊಠಡಿ ಅವಶ್ಯಕತೆ ಬಹಳ ಇದ್ದು ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.


ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ರಾಘವೇಂದ್ರ ನಾಯಕ್‌ ಮಾತನಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್‌ ಸದಸ್ಯರಾದ ವಾಮನ ತಾಮನ್ನ‌ರ್, ಅರಿಕೆಗುಡ್ಡೆ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಗಣೇಶ್ ಕೆ ಹೊಸ್ತೋಟ, ಹತ್ಯಡ್ಕ ಪ್ರಾ.ಕೃ.ಪ.ಸ.ಸ ನಿರ್ದೇಶಕರಾದ ಮುರಳಿಧರ್ ಶೆಟ್ಟಿಗಾ‌ರ್, ವೃಶಾಂಕ್ ಖಾಡಿಲ್ಕರ್, ಕಾಲೇಜು ಪ್ರಿನ್ಸಿಪಾಲ್ ರಾಮಯ್ಯ ಶೆಟ್ಟಿ, ಹೈಸ್ಕೂಲ್ ಮುಖ್ಯಗುರುಗಳಾದ ಚಂದ್ರು, ಕಾಲೇಜು ಉಪನ್ಯಾಸಕರುಗಳು, ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ರಾಮಯ್ಯ ಶೆಟ್ಟಿ ಸ್ವಾಗತಿಸಿ , ರಾಘವೇಂದ್ರ ನಾಯಕ್ ಧನ್ಯವಾದವಿತ್ತರು.

Related posts

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya
error: Content is protected !!