ಮಚ್ಚಿನ : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ ” ವು ಫೆ. 12 ರಂದು ಮಚ್ಚಿನ ಗ್ರಾಮ ಪಂಚಾಯಿತಿನಿಂದ ಸಮುದಾಯ ಭವನದವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥ ನಡೆಯಿತು.
ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ರುಕ್ಮಿಣಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಇಲ್ಲಿಯ ಶಾಲಾ ಮಕ್ಕಳು ಮುಖ್ಯೋಪಾಧ್ಯಾಯರು, ಶಿಕ್ಷಕ ಬಳಗ, ಸದಸ್ಯರಾದ ಪ್ರಮೋದ್ ಕುಮಾರ್, ಡಿಕಮ್ಮ, ರಮ್ಯಶ್ರೀ, ತಾರಾ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.