24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಸುವರ್ಣ ಆರ್ಕೆಡ್ ಬೆಳ್ತಂಗಡಿ ಅರ್ಪಿಸುವ 14ನೇ ವರ್ಷದ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಫೆ.20 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ನಲ್ಲಿ ನಡೆಯಲಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ತಿಳಿಸಿದ್ದಾರೆ.

ನಾಡಿನ ಸಾಧಕರಿಗೆ ‘ಸುವರ್ಣರಂಗ’ ಸನ್ಮಾನ ಸಾಂಸ್ಕೃತಿಕ ಕ್ಷೇತ್ರದ ಮೇರು ಸಾಧಕರನ್ನು ಗುರುತಿಸಿ, ಅವರ ಕಲಾಸೇವೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಷ್ಠಾನವು ಪ್ರತಿವರ್ಷ ‘ಸುವರ್ಣ ರಂಗ ಸಮ್ಮಾನ್’ ಗೌರವ ಪುರಸ್ಕಾರವನ್ನು ನೀಡುತ್ತಿದೆ.

ಈ ಬಾರಿಯ ಪ್ರಶಸ್ತಿಯನ್ನು ಕರಾವಳಿಯ ಗಂಡುಕಲೆ ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತರಾದ ಶ್ರೀಮತಿ ಕಾವ್ಯಶ್ರೀ ಅಜೇರು, ಪ್ರಸಿದ್ದ ದೈವ ನರ್ತಕರು ಮತ್ತು ಸಿವಿಲ್ ಇಂಜಿನಿಯರ್ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ರವೀಶ್ ಪಡುಮಲೆ, ಕಲಾ ಪೋಷಕರು ಮತ್ತು ಸಾಂಸ್ಕೃತಿಕ ಸಂಘಟಕರಾದ ಭುಜಬಲಿ ಬಿ ಧರ್ಮಸ್ಥಳ ಅವರಿಗೆ ನೀಡಲಾಗುತ್ತದೆ.

ಈ ತನಕ ಕನ್ನಡ ಚಿತ್ರ ರಂಗದ ಹಿರಿಯ ಅಭಿನೇತ್ರಿ ಲೀಲಾವತಿ, ಕಿರುತೆರೆ ನಿರ್ದೇಶಕ ವಿನು ಬಳಂಜ, ಸಾಂಸ್ಕೃತಿಕ ಸಂಘಟಕ ಡಾ.ಎಂ. ಮೋಹನ ಆಳ್ವ, ಭಾಗವತ ಸತೀಶ್ ಶೆಟ್ಟಿ ಪಟ್ಲ, ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾವ್, ರಂಗನಟರಾದ ಭೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸುಂದರ ರೈ ಮಂದಾರ, ರಂಗನಟ, ನಿರ್ದೇಶಕ ದೇವದಾಸ್ ಕಾಪಿಕಾಡ್, ಯಕ್ಷಗಾನ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ ಮತ್ತು ಪಂಚಭಾಷಾ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ,ಖ್ಯಾತ ರಂಗಭೂಮಿ ಕಲಾವಿದ ನವೀನ್ ಡಿ ಪಡೀಲ್,ಯಕ್ಷಗಾನ ಭಾಗವತ ರವಿಚ್ಚಂದ್ರ ಕನ್ನಡಿಕಟ್ಟೆ ಅವರಿಗೆ ನೀಡಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ 7:00ಕ್ಕೆ ಯಕ್ಷ-ಗಾನ-ವೈಭವ ನಡೆಯಲಿದ್ದು ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಶ್ರೀಮತಿ ಕಾವ್ಯಶ್ರೀ ಅಜೇರು, ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ್ ಆಚಾರ್ಯ ಗುರುವಾಯನಕೆರೆ, ಶಿತಿಕಂಠ ಭಟ್ ಉಜಿರೆ ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 8:00ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್, ಮಂಜೇಶ್ವರ ಅಭಿನಯಿಸುವ ” ಕಲ್ಜಿಗದ ಮಾಯ್ಕಾರೆ ಪಂಜುರ್ಲಿ ” ತುಳು ಪೌರಾಣಿಕ ಮತ್ತು ಸಾಮಾಜಿಕ ಭಕ್ತಿ ಪ್ರಧಾನ ನಾಟಕ ನಡೆಯಲಿದೆ‌ ಎಂದು ತಿಳಿಸಿದರು.

Related posts

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!