23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಬೆಳ್ತಂಗಡಿ: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬ‌ರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಅಧಿವೇಶನದಲ್ಲಿ ತಿಳಿಸಿದ್ದಾರೆ.


ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬ‌ರ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.

Related posts

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya
error: Content is protected !!