23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು.

ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ ಮರುದಿನ ಪಂಚಮಿಯಂದು ಕ್ಷೇತ್ರದ ವತಿಯಿಂದ ನಾಗದೇವರಿಗೆ ತಂಬಿಲ ಸೇವೆ ನಡೆಸುವಂತೆ ಕಂಡುಬಂದಿತ್ತು. ಆ ಪ್ರಯುಕ್ತ ಇಂದು ಪ್ರಥಮವಾಗಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯರು ಪೂಜೆಯನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ ವಿ.ಮತ್ತು ಕೊರಗಪ್ಪ ಶೆಟ್ಟಿ ಮುಂಡ್ರೆಲು, ಬಾಲಕೃಷ್ಣ ನೈಮಿಶ ಹಾಗೂ ಸುಬ್ರಹ್ಮಣ್ಯ ಪರ್ಲಾಯರು ಉಪಸ್ಥಿತರಿದ್ದರು.

Related posts

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!