37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಬೆಳ್ತಂಗಡಿ: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬ‌ರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಅಧಿವೇಶನದಲ್ಲಿ ತಿಳಿಸಿದ್ದಾರೆ.


ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬ‌ರ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.

Related posts

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya
error: Content is protected !!