38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್‌ ಆಪ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ವಿವಿಧ ಖಾತೆಗಳಿಗೆ ಒಟ್ಟು ರೂ.6,95,148 /- ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಫೆ.12 ರಂದು ನಡೆದಿದೆ.

ಕುವೆಟ್ಟು ನಿವಾಸಿ ನುಪೈಲಾ ಕೆ ಐ (26) ಎಂಬವರ ದೂರಿನಂತೆ, ಫೆ. 06 ರಂದು ಟೆಲಿಗ್ರಾಮ್‌ ಆಪ್‌ ಮೂಲಕ, ಡಾಟ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸಿದ್ದು, ಈ ವೇಳೆ ರೂ 900/- ನ್ನು ನುಪೈಲ್ ಕೆ.ಐ ರವರ ಖಾತೆಗೆ ಹಾಕಿರುತ್ತಾರೆ. ಆ ಬಳಿಕ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿ, ಫೆ.08 ರಿಂದ ಫೆ.12 ರ ಅವಧಿಯಲ್ಲಿ, ವಿವಿಧ ಖಾತೆಗಳಿಗೆ ಪಿರ್ಯಾದಿದಾರರ ಖಾತೆಯಿಂದ ಆನ್‌ ಲೈನ್‌ ಮೂಲಕ ಒಟ್ಟು ರೂ 6,95,148 /- ಗಳನ್ನು ವರ್ಗಾಯಿಸಿಕೊಂಡಿದ್ದು. ವರ್ಗಾಯಿಸಿಕೊಂಡ ಹಣವನ್ನು ಮರುಪಾವತಿಸದೇ ಆನ್‌ ಲೈನ್‌ ಮೂಲಕ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 20/2024 ಕಲಂ 419,420, IPC , & 66(D) IT Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya
error: Content is protected !!