April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್‌ ಆಪ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ವಿವಿಧ ಖಾತೆಗಳಿಗೆ ಒಟ್ಟು ರೂ.6,95,148 /- ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಫೆ.12 ರಂದು ನಡೆದಿದೆ.

ಕುವೆಟ್ಟು ನಿವಾಸಿ ನುಪೈಲಾ ಕೆ ಐ (26) ಎಂಬವರ ದೂರಿನಂತೆ, ಫೆ. 06 ರಂದು ಟೆಲಿಗ್ರಾಮ್‌ ಆಪ್‌ ಮೂಲಕ, ಡಾಟ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸಿದ್ದು, ಈ ವೇಳೆ ರೂ 900/- ನ್ನು ನುಪೈಲ್ ಕೆ.ಐ ರವರ ಖಾತೆಗೆ ಹಾಕಿರುತ್ತಾರೆ. ಆ ಬಳಿಕ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿ, ಫೆ.08 ರಿಂದ ಫೆ.12 ರ ಅವಧಿಯಲ್ಲಿ, ವಿವಿಧ ಖಾತೆಗಳಿಗೆ ಪಿರ್ಯಾದಿದಾರರ ಖಾತೆಯಿಂದ ಆನ್‌ ಲೈನ್‌ ಮೂಲಕ ಒಟ್ಟು ರೂ 6,95,148 /- ಗಳನ್ನು ವರ್ಗಾಯಿಸಿಕೊಂಡಿದ್ದು. ವರ್ಗಾಯಿಸಿಕೊಂಡ ಹಣವನ್ನು ಮರುಪಾವತಿಸದೇ ಆನ್‌ ಲೈನ್‌ ಮೂಲಕ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 20/2024 ಕಲಂ 419,420, IPC , & 66(D) IT Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya
error: Content is protected !!