25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್‌ ಆಪ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ವಿವಿಧ ಖಾತೆಗಳಿಗೆ ಒಟ್ಟು ರೂ.6,95,148 /- ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಫೆ.12 ರಂದು ನಡೆದಿದೆ.

ಕುವೆಟ್ಟು ನಿವಾಸಿ ನುಪೈಲಾ ಕೆ ಐ (26) ಎಂಬವರ ದೂರಿನಂತೆ, ಫೆ. 06 ರಂದು ಟೆಲಿಗ್ರಾಮ್‌ ಆಪ್‌ ಮೂಲಕ, ಡಾಟ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸಿದ್ದು, ಈ ವೇಳೆ ರೂ 900/- ನ್ನು ನುಪೈಲ್ ಕೆ.ಐ ರವರ ಖಾತೆಗೆ ಹಾಕಿರುತ್ತಾರೆ. ಆ ಬಳಿಕ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿ, ಫೆ.08 ರಿಂದ ಫೆ.12 ರ ಅವಧಿಯಲ್ಲಿ, ವಿವಿಧ ಖಾತೆಗಳಿಗೆ ಪಿರ್ಯಾದಿದಾರರ ಖಾತೆಯಿಂದ ಆನ್‌ ಲೈನ್‌ ಮೂಲಕ ಒಟ್ಟು ರೂ 6,95,148 /- ಗಳನ್ನು ವರ್ಗಾಯಿಸಿಕೊಂಡಿದ್ದು. ವರ್ಗಾಯಿಸಿಕೊಂಡ ಹಣವನ್ನು ಮರುಪಾವತಿಸದೇ ಆನ್‌ ಲೈನ್‌ ಮೂಲಕ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 20/2024 ಕಲಂ 419,420, IPC , & 66(D) IT Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ಅತಿಥಿ ಉಪನ್ಯಾಸ: ಸೃಷ್ಟಿಕರ್ತ ಆರ್ಥಿಕತೆ ಮತ್ತು ಕೃತಕ ಬುದ್ಧಿಮತ್ತೆ ಕುರಿತು ಚರ್ಚೆ

Suddi Udaya
error: Content is protected !!