22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್‌ ಆಪ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ವಿವಿಧ ಖಾತೆಗಳಿಗೆ ಒಟ್ಟು ರೂ.6,95,148 /- ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಫೆ.12 ರಂದು ನಡೆದಿದೆ.

ಕುವೆಟ್ಟು ನಿವಾಸಿ ನುಪೈಲಾ ಕೆ ಐ (26) ಎಂಬವರ ದೂರಿನಂತೆ, ಫೆ. 06 ರಂದು ಟೆಲಿಗ್ರಾಮ್‌ ಆಪ್‌ ಮೂಲಕ, ಡಾಟ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸಿದ್ದು, ಈ ವೇಳೆ ರೂ 900/- ನ್ನು ನುಪೈಲ್ ಕೆ.ಐ ರವರ ಖಾತೆಗೆ ಹಾಕಿರುತ್ತಾರೆ. ಆ ಬಳಿಕ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿ, ಫೆ.08 ರಿಂದ ಫೆ.12 ರ ಅವಧಿಯಲ್ಲಿ, ವಿವಿಧ ಖಾತೆಗಳಿಗೆ ಪಿರ್ಯಾದಿದಾರರ ಖಾತೆಯಿಂದ ಆನ್‌ ಲೈನ್‌ ಮೂಲಕ ಒಟ್ಟು ರೂ 6,95,148 /- ಗಳನ್ನು ವರ್ಗಾಯಿಸಿಕೊಂಡಿದ್ದು. ವರ್ಗಾಯಿಸಿಕೊಂಡ ಹಣವನ್ನು ಮರುಪಾವತಿಸದೇ ಆನ್‌ ಲೈನ್‌ ಮೂಲಕ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 20/2024 ಕಲಂ 419,420, IPC , & 66(D) IT Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!