23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್‌ ಆಪ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ವಿವಿಧ ಖಾತೆಗಳಿಗೆ ಒಟ್ಟು ರೂ.6,95,148 /- ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಫೆ.12 ರಂದು ನಡೆದಿದೆ.

ಕುವೆಟ್ಟು ನಿವಾಸಿ ನುಪೈಲಾ ಕೆ ಐ (26) ಎಂಬವರ ದೂರಿನಂತೆ, ಫೆ. 06 ರಂದು ಟೆಲಿಗ್ರಾಮ್‌ ಆಪ್‌ ಮೂಲಕ, ಡಾಟ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸಿದ್ದು, ಈ ವೇಳೆ ರೂ 900/- ನ್ನು ನುಪೈಲ್ ಕೆ.ಐ ರವರ ಖಾತೆಗೆ ಹಾಕಿರುತ್ತಾರೆ. ಆ ಬಳಿಕ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿ, ಫೆ.08 ರಿಂದ ಫೆ.12 ರ ಅವಧಿಯಲ್ಲಿ, ವಿವಿಧ ಖಾತೆಗಳಿಗೆ ಪಿರ್ಯಾದಿದಾರರ ಖಾತೆಯಿಂದ ಆನ್‌ ಲೈನ್‌ ಮೂಲಕ ಒಟ್ಟು ರೂ 6,95,148 /- ಗಳನ್ನು ವರ್ಗಾಯಿಸಿಕೊಂಡಿದ್ದು. ವರ್ಗಾಯಿಸಿಕೊಂಡ ಹಣವನ್ನು ಮರುಪಾವತಿಸದೇ ಆನ್‌ ಲೈನ್‌ ಮೂಲಕ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 20/2024 ಕಲಂ 419,420, IPC , & 66(D) IT Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣಾವಕಾಶ ಬೆಳ್ತಂಗಡಿಯಲ್ಲಿ ನೂತನವಾಗಿ ಶುಭಾರಂಭಗೊಂಡ ಬೇಬಿ ಕ್ಲೌಡ್ ಕೆಜಿ ಮಾರ್ಟ್ ಕೆಜಿ ಲೆಕ್ಕದಲ್ಲಿ ಮಕ್ಕಳ ಉಡುಪು ನೀಡುವ ಈ ಉದ್ಯಮ ಸಫಲವಾಗಲಿ – ರಕ್ಷಿತ್ ಶಿವಾರಂ

Suddi Udaya

ಮಂಗಳೂರು ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಕೊಕ್ರಾಡಿ ಹರಿಶ್ವoದ್ರ ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!