22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್‌ ಆಪ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ವಿವಿಧ ಖಾತೆಗಳಿಗೆ ಒಟ್ಟು ರೂ.6,95,148 /- ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಫೆ.12 ರಂದು ನಡೆದಿದೆ.

ಕುವೆಟ್ಟು ನಿವಾಸಿ ನುಪೈಲಾ ಕೆ ಐ (26) ಎಂಬವರ ದೂರಿನಂತೆ, ಫೆ. 06 ರಂದು ಟೆಲಿಗ್ರಾಮ್‌ ಆಪ್‌ ಮೂಲಕ, ಡಾಟ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸಿದ್ದು, ಈ ವೇಳೆ ರೂ 900/- ನ್ನು ನುಪೈಲ್ ಕೆ.ಐ ರವರ ಖಾತೆಗೆ ಹಾಕಿರುತ್ತಾರೆ. ಆ ಬಳಿಕ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿ, ಫೆ.08 ರಿಂದ ಫೆ.12 ರ ಅವಧಿಯಲ್ಲಿ, ವಿವಿಧ ಖಾತೆಗಳಿಗೆ ಪಿರ್ಯಾದಿದಾರರ ಖಾತೆಯಿಂದ ಆನ್‌ ಲೈನ್‌ ಮೂಲಕ ಒಟ್ಟು ರೂ 6,95,148 /- ಗಳನ್ನು ವರ್ಗಾಯಿಸಿಕೊಂಡಿದ್ದು. ವರ್ಗಾಯಿಸಿಕೊಂಡ ಹಣವನ್ನು ಮರುಪಾವತಿಸದೇ ಆನ್‌ ಲೈನ್‌ ಮೂಲಕ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 20/2024 ಕಲಂ 419,420, IPC , & 66(D) IT Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya
error: Content is protected !!