23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್‌ ಆಪ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ವಿವಿಧ ಖಾತೆಗಳಿಗೆ ಒಟ್ಟು ರೂ.6,95,148 /- ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಫೆ.12 ರಂದು ನಡೆದಿದೆ.

ಕುವೆಟ್ಟು ನಿವಾಸಿ ನುಪೈಲಾ ಕೆ ಐ (26) ಎಂಬವರ ದೂರಿನಂತೆ, ಫೆ. 06 ರಂದು ಟೆಲಿಗ್ರಾಮ್‌ ಆಪ್‌ ಮೂಲಕ, ಡಾಟ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸಿದ್ದು, ಈ ವೇಳೆ ರೂ 900/- ನ್ನು ನುಪೈಲ್ ಕೆ.ಐ ರವರ ಖಾತೆಗೆ ಹಾಕಿರುತ್ತಾರೆ. ಆ ಬಳಿಕ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿ, ಫೆ.08 ರಿಂದ ಫೆ.12 ರ ಅವಧಿಯಲ್ಲಿ, ವಿವಿಧ ಖಾತೆಗಳಿಗೆ ಪಿರ್ಯಾದಿದಾರರ ಖಾತೆಯಿಂದ ಆನ್‌ ಲೈನ್‌ ಮೂಲಕ ಒಟ್ಟು ರೂ 6,95,148 /- ಗಳನ್ನು ವರ್ಗಾಯಿಸಿಕೊಂಡಿದ್ದು. ವರ್ಗಾಯಿಸಿಕೊಂಡ ಹಣವನ್ನು ಮರುಪಾವತಿಸದೇ ಆನ್‌ ಲೈನ್‌ ಮೂಲಕ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 20/2024 ಕಲಂ 419,420, IPC , & 66(D) IT Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!