25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

ಬೆಳ್ತಂಗಡಿ: ಟೆಲಿಗ್ರಾಮ್‌ ಆಪ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ವಿವಿಧ ಖಾತೆಗಳಿಗೆ ಒಟ್ಟು ರೂ.6,95,148 /- ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಫೆ.12 ರಂದು ನಡೆದಿದೆ.

ಕುವೆಟ್ಟು ನಿವಾಸಿ ನುಪೈಲಾ ಕೆ ಐ (26) ಎಂಬವರ ದೂರಿನಂತೆ, ಫೆ. 06 ರಂದು ಟೆಲಿಗ್ರಾಮ್‌ ಆಪ್‌ ಮೂಲಕ, ಡಾಟ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸಿದ್ದು, ಈ ವೇಳೆ ರೂ 900/- ನ್ನು ನುಪೈಲ್ ಕೆ.ಐ ರವರ ಖಾತೆಗೆ ಹಾಕಿರುತ್ತಾರೆ. ಆ ಬಳಿಕ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿ, ಫೆ.08 ರಿಂದ ಫೆ.12 ರ ಅವಧಿಯಲ್ಲಿ, ವಿವಿಧ ಖಾತೆಗಳಿಗೆ ಪಿರ್ಯಾದಿದಾರರ ಖಾತೆಯಿಂದ ಆನ್‌ ಲೈನ್‌ ಮೂಲಕ ಒಟ್ಟು ರೂ 6,95,148 /- ಗಳನ್ನು ವರ್ಗಾಯಿಸಿಕೊಂಡಿದ್ದು. ವರ್ಗಾಯಿಸಿಕೊಂಡ ಹಣವನ್ನು ಮರುಪಾವತಿಸದೇ ಆನ್‌ ಲೈನ್‌ ಮೂಲಕ ವಂಚಿಸಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 20/2024 ಕಲಂ 419,420, IPC , & 66(D) IT Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya
error: Content is protected !!