22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಉನ್ನತ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯಗಳಾದ ಐಐಟಿ , ಎನ್ ಐ ಐ ಟಿ ಗಳ ಪ್ರವೇಶಾತಿಗಾಗಿ ನಡೆಯುವ ಜೆ ಇ ಇ ಮೈನ್ಸ್ ನ ಮೊದಲ ಸ್ಲಾಟ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಎಚ್. ಎಂ 99.8869 ಶೇ, ಅಭಿಷೇಕ್ 98.7072 ಶೇ, ನೌಮನ್ ಶೇಕ್ 98.6863 ಶೇ, ,ಚಿನ್ಮಯ್ ವೈ.ಕೆ 98.3301, ಸಿಂಚನ್ 97.8593, ಮಹಾದೇವ ಸ್ವಾಮಿ 97.5002, ಶಾಶ್ವತ್ ಎಸ್. ಪಿ 96.69, ತನ್ವಿ ಆರ್ ಟಿ 96.56, ಸಿದ್ಧಾರ್ಥ್ ಎಚ್ ಆರ್ 96.47, ರಿಷ್ವಿತ್ ಶೆಟ್ಟಿ 95.81, ಧ್ಯಾನ್ 95. 39 ಪರ್ಸಂಟೇಲ್ ಪಡೆದಿದ್ದಾರೆ. ಎಕ್ಸೆಲ್ ಪದವಿ ಪೂರ್ವ ಕಾಲೇಜಿನ 72 ವಿದ್ಯಾರ್ಥಿಗಳ ಪೈಕಿ 53 ವಿದ್ಯಾರ್ಥಿಗಳು 90 ಶೇಕಡಾ ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.


ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್ , ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಯಾದ ಸಿ ಇ ಟಿ, ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ನಾಟಾ ಮೊದಲಾದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ಅತ್ಯಂತ ಪ್ರತಿಭಾವಂತ, ದಕ್ಷಿಣ ಭಾರತದಲ್ಲೆ ಹೆಸರುವಾಸಿಯಾದ ಉಪನ್ಯಾಸಕ ರಿಂದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಕೊಡಿಸಲಾಗುತ್ತಿದೆ. ಎಕ್ಸೆಲ್ ನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಹೆಸರು ವಾಸಿಯಾದ AIIMS, IIT,NIIT, ಹಾಗೂ ಸುಪ್ರಸಿದ್ಧ ವೈದ್ಯಕೀಯ ಹಾಗೂ ಎಂಜನಿಯರಿಂಗ್ ಕಾಲೇಜುಗಳಲ್ಲಿ ಮೆರಿಟ್ ಕೋಟಾದಡಿ ಸೀಟ್ ಪಡೆದು ಅಭ್ಯಾಸ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ , ಮಧ್ಯಮ ವರ್ಗದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾಗುವ ನಿಟ್ಟಿನಲ್ಲಿ ಸ್ಥಾಪನೆಯಾದ ಎಕ್ಸೆಲ್ ಇಂದು ರಾಜ್ಯ ಹಾಗೂ ನೆರೆ ರಾಜ್ಯಗಳ ಮೂಲೆ ಮೂಲೆಗಳಿಂದ ಪ್ರತಿಭಾವಂತ ವಿದ್ಯಾರ್ಥಿ ಗಳನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ.


ಜೆ ಇ ಇ ಮೈನ್ಸ್ , ಮೊದಲ ಸ್ಲಾಟ್ ನಲ್ಲಿ ಅತ್ಯುತ್ತಮ ಫಲಿತಾಂಶ ತಂದ ವಿದ್ಯಾರ್ಥಿಗಳ ನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya
error: Content is protected !!