23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಉನ್ನತ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯಗಳಾದ ಐಐಟಿ , ಎನ್ ಐ ಐ ಟಿ ಗಳ ಪ್ರವೇಶಾತಿಗಾಗಿ ನಡೆಯುವ ಜೆ ಇ ಇ ಮೈನ್ಸ್ ನ ಮೊದಲ ಸ್ಲಾಟ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ.

ಪ್ರಜ್ವಲ್ ಎಚ್. ಎಂ 99.8869 ಶೇ, ಅಭಿಷೇಕ್ 98.7072 ಶೇ, ನೌಮನ್ ಶೇಕ್ 98.6863 ಶೇ, ,ಚಿನ್ಮಯ್ ವೈ.ಕೆ 98.3301, ಸಿಂಚನ್ 97.8593, ಮಹಾದೇವ ಸ್ವಾಮಿ 97.5002, ಶಾಶ್ವತ್ ಎಸ್. ಪಿ 96.69, ತನ್ವಿ ಆರ್ ಟಿ 96.56, ಸಿದ್ಧಾರ್ಥ್ ಎಚ್ ಆರ್ 96.47, ರಿಷ್ವಿತ್ ಶೆಟ್ಟಿ 95.81, ಧ್ಯಾನ್ 95. 39 ಪರ್ಸಂಟೇಲ್ ಪಡೆದಿದ್ದಾರೆ. ಎಕ್ಸೆಲ್ ಪದವಿ ಪೂರ್ವ ಕಾಲೇಜಿನ 72 ವಿದ್ಯಾರ್ಥಿಗಳ ಪೈಕಿ 53 ವಿದ್ಯಾರ್ಥಿಗಳು 90 ಶೇಕಡಾ ಪರ್ಸಂಟೇಲ್ ಪಡೆದು ಕೊಂಡಿದ್ದಾರೆ.


ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್ , ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಯಾದ ಸಿ ಇ ಟಿ, ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ನಾಟಾ ಮೊದಲಾದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ಅತ್ಯಂತ ಪ್ರತಿಭಾವಂತ, ದಕ್ಷಿಣ ಭಾರತದಲ್ಲೆ ಹೆಸರುವಾಸಿಯಾದ ಉಪನ್ಯಾಸಕ ರಿಂದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಕೊಡಿಸಲಾಗುತ್ತಿದೆ. ಎಕ್ಸೆಲ್ ನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಹೆಸರು ವಾಸಿಯಾದ AIIMS, IIT,NIIT, ಹಾಗೂ ಸುಪ್ರಸಿದ್ಧ ವೈದ್ಯಕೀಯ ಹಾಗೂ ಎಂಜನಿಯರಿಂಗ್ ಕಾಲೇಜುಗಳಲ್ಲಿ ಮೆರಿಟ್ ಕೋಟಾದಡಿ ಸೀಟ್ ಪಡೆದು ಅಭ್ಯಾಸ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ , ಮಧ್ಯಮ ವರ್ಗದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾಗುವ ನಿಟ್ಟಿನಲ್ಲಿ ಸ್ಥಾಪನೆಯಾದ ಎಕ್ಸೆಲ್ ಇಂದು ರಾಜ್ಯ ಹಾಗೂ ನೆರೆ ರಾಜ್ಯಗಳ ಮೂಲೆ ಮೂಲೆಗಳಿಂದ ಪ್ರತಿಭಾವಂತ ವಿದ್ಯಾರ್ಥಿ ಗಳನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ.


ಜೆ ಇ ಇ ಮೈನ್ಸ್ , ಮೊದಲ ಸ್ಲಾಟ್ ನಲ್ಲಿ ಅತ್ಯುತ್ತಮ ಫಲಿತಾಂಶ ತಂದ ವಿದ್ಯಾರ್ಥಿಗಳ ನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya
error: Content is protected !!