27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಗ್ರಾಮ ಸಭೆ ಫೆ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.


ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಆಗುತ್ತಿರುವ ಕೌಟುಂಬಿಕ ದೌರ್ಜನ್ಯ,ಬಾಲ್ಯ ವಿವಾಹ, ಪೋಕ್ಸೊ ಕಾಯಿದೆ ಬಗ್ಗೆ ಮಾಹಿತಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಸುಮನ ಎಸ್ ನೀಡಿದರು.


ಕಾನೂನು ಸುವ್ಯವಸ್ಥಿತವಾಗಿರಲು ಮಹಿಳೆಯರ ಜವಾಬ್ದಾರಿ ಹೆಚ್ಚಿದೆ. ಮಕ್ಕಳು ಮೊಬೈಲ್ ಬಳಕೆ ಮಾಡುವುದರಿಂದ ವಿಧ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಾಗೂ ಜೀವನಕ್ಕೆ ಕಂಟಕವಾಗುತ್ತದೆ ತಾಯಂದಿರು ಎಚ್ಚರಿಕೆಯಿಂದ ಮಕ್ಕಳು ದುಶ್ಚಟಕ್ಕೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯ, ಹಾಗೂ ಇತ್ತೀಚೆಗೆ ಅಪ್ರಾಪ್ತ ಮಕ್ಕಳು ದ್ವಿಚಕ್ರ ವಾಹನ ಚಲಾಯಿಸುವ ಅನೇಕ ತೊಂದರೆಗಳು ಆಗುತ್ತಿದೆ ಎಂದು ಬೆಳ್ತಂಗಡಿ ಮಹಿಳಾ ಪೋಲಿಸ್ ಸವೀತ ಶೆಟ್ಟಿ ತಿಳಿಸಿದರು.


ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತಿ ಸದಸ್ಯರಾದ ಸುಧಾಕರ ಮಜಲು, ಅಬ್ದುಲ್ ಕರೀಂ ಕೆ.ಎಮ್. ಕುಸುಮ ಎನ್.ಬಂಗೇರ, ಮೋಹಿನಿ ಬಿ.ಗೌಡ, ಮರೀಟಾ ಪಿಂಟೋ, ಶ್ವೇತಾ ಶ್ರೀನಿವಾಸ್, ಪುಷ್ಪ ಮತ್ತು ಕಳಿಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಂಞ ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಸಂಘದ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು ಮತ್ತು ಮಹಿಳೆಯರು ಭಾಗವಹಿಸಿದರು.

Related posts

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!