22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು.

ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ ಮರುದಿನ ಪಂಚಮಿಯಂದು ಕ್ಷೇತ್ರದ ವತಿಯಿಂದ ನಾಗದೇವರಿಗೆ ತಂಬಿಲ ಸೇವೆ ನಡೆಸುವಂತೆ ಕಂಡುಬಂದಿತ್ತು. ಆ ಪ್ರಯುಕ್ತ ಇಂದು ಪ್ರಥಮವಾಗಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯರು ಪೂಜೆಯನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ ವಿ.ಮತ್ತು ಕೊರಗಪ್ಪ ಶೆಟ್ಟಿ ಮುಂಡ್ರೆಲು, ಬಾಲಕೃಷ್ಣ ನೈಮಿಶ ಹಾಗೂ ಸುಬ್ರಹ್ಮಣ್ಯ ಪರ್ಲಾಯರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ತಣ್ಣೀರುಪಂತ: ಕುದ್ರಡ್ಕ ನಿವಾಸಿ ಗಿರಿಜಾ ನಿಧನ

Suddi Udaya
error: Content is protected !!